¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
TSK
TSK · ಯೆಶಾಯ 19:20
مراجع Treasury of Scripture Knowledge في ಕನ್ನಡ IRV.
ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.
ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,
ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.