ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು. ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದು ಹಾಕಿ ಫಿಲಿಷ್ಟಿಯ ಸೈನ್ಯದ ಶವಗಳನ್ನು ಮೃಗ ಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲರೊಳಗೆ ದೇವರಿದ್ದಾನೆಂಬುದು ಭೂಲೋಕದವರಿಗೆಲ್ಲಾ ತಿಳಿದುಬರುವುದು.
TSK
TSK · ಯೆಶಾಯ 19:21
مراجع Treasury of Scripture Knowledge في ಕನ್ನಡ IRV.
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.
(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
ಯೇಸು ಆಕೆಗೆ ‹“ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.›
ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.