ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
TSK
TSK · ಯೆಶಾಯ 2:11
مراجع Treasury of Scripture Knowledge في ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.
ಅಹಂಕಾರಿಗಳೆಲ್ಲಾ ಯೆಹೋವನಿಗೆ ಅಸಹ್ಯ, ಅವರಿಗೆ ದಂಡನೆ ಖಂಡಿತ.
ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.
ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
¶ ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.
ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
ನಾನು ರೋಷದಿಂದ ಮತ್ತು ಕೋಪದಿಂದ ಉರಿಯುತ್ತಾ ಹೀಗೆ ನುಡಿದಿದ್ದೇನೆ, ‘ಆಹಾ, ಆ ದಿನದಲ್ಲಿ ಇಸ್ರಾಯೇಲ್ ದೇಶದೊಳಗೆ ಮಹಾಕಂಪನವಾಗುವುದು ಖಂಡಿತ.
ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.
ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ದೈಹಿಕವಾಗಿ ಊನವಾದ ಜನಾಂಗವನ್ನು ಒಟ್ಟುಗೂಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು.
ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.
ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”