ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
TSK
TSK · ಯೆಶಾಯ 2:12
مراجع Treasury of Scripture Knowledge في ಕನ್ನಡ IRV.
ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
ಯೆಹೋವನು ಹಗೆಮಾಡುವ ವಿಷಯಗಳು ಆರು ಇವೆ, ಹೌದು, ಏಳು ಸಂಗತಿಗಳು ಆತನಿಗೆ ಅಸಹ್ಯವಾಗಿ ತೋರುತ್ತವೆ.
ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ, ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.
ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.
“ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.
¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.
ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;
‹ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.
ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.