TSK

TSK · ಯೆಶಾಯ 2:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.

ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.

ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.

ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.

¶ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.

¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.

ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.

ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.

¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,

¶ ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.