TSK

TSK · ಯೆಶಾಯ 2:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.

ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,

ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”

¶ ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.

“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.

ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.

¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

¶ ‹“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.