ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.
TSK
TSK · ಯೆಶಾಯ 2:9
مراجع Treasury of Scripture Knowledge في ಕನ್ನಡ IRV.
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.