TSK

TSK · ಯೆಶಾಯ 21:2

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು.

ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.

ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.

¶ ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ, ಅವರು ಹರ್ಷಧ್ವನಿಗೈಯುತ್ತಾರೆ.

¶ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,

“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಏಲಾಮಿನ ಬಲವಾದ ಮುಖ್ಯ ಬಿಲ್ಲನ್ನು ಮುರಿದುಬಿಡುವೆನು.

ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”

ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!

ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.

ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”

ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು.

ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.

ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”