ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!
TSK
TSK · ಯೆಶಾಯ 21:9
مراجع Treasury of Scripture Knowledge في ಕನ್ನಡ IRV.
“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.
ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.
“ದೇಶದಲ್ಲಿ ಧ್ವಜವನ್ನೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸಿದ್ಧಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಧಿಪತಿಯನ್ನು ನೇಮಿಸಿರಿ, ಅಶ್ವಬಲವನ್ನು ಬಿರುಸಾದ ಮಿಡತೆಯ ದಂಡಿನೋಪಾದಿಯಲ್ಲಿ ಬರಮಾಡಿರಿ.
ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.
ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.
ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.