TSK

TSK · ಯೆಶಾಯ 22:11

مراجع Treasury of Scripture Knowledge في ಕನ್ನಡ IRV.

العودة إلى المقطع

ಹಿಜ್ಕೀಯನ ಉಳಿದ ಚರಿತ್ರೆಯೂ, ಅವನ ಪರಾಕ್ರಮಕೃತ್ಯಗಳೂ, ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದ ರಾಜಕಾಲವೃತ್ತಾಂತ ಪುಸ್ತಕ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.

ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.

¶ ಆಗ ಯೆಹೋವನು ಯೆಶಾಯನಿಗೆ ಹೀಗೆ ಹೇಳಿದನು, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಕಡೆ ಹೋಗುವ ರಾಜಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯಲ್ಲಿ ಆಹಾಜನನ್ನು ಎದುರುಗೊಂಡು ಅವನಿಗೆ ಈ ಪ್ರಕಾರ ಹೇಳಬೇಕು,

ಆ ದಿನದಲ್ಲಿ ಜನರು ತಮ್ಮ ಸೃಷ್ಟಿಕರ್ತನನ್ನೇ ದೃಷ್ಟಿಸುವರು ಮತ್ತು ಇಸ್ರಾಯೇಲಿನ ಸದಮಲಸ್ವಾಮಿಯ ಕಡೆಗೆ ಕಣ್ಣುಗಳನ್ನು ತಿರುಗಿಸುವರು.

ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.

ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.