TSK

TSK · ಯೆಶಾಯ 22:5

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

¶ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?

ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.

ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.

¶ ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.

ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!

‹ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.›