TSK

TSK · ಯೆಶಾಯ 23:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.

¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.

¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.

ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

‘ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.

¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.

¶ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.