ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
TSK
TSK · ಯೆಶಾಯ 24:16
مراجع Treasury of Scripture Knowledge في ಕನ್ನಡ IRV.
ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.
ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,
“ಆ ದಿನದಲ್ಲಿ, ಯಾಕೋಬಿನ ಮಾಂಸದ ಕೊಬ್ಬು ಕರಗಿ, ಅದರ ಮಹಿಮೆಯೂ ಕ್ಷೀಣವಾಗುವುದು.
ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.
ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?
ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.
ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
¶ ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.