ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
TSK
TSK · ಯೆಶಾಯ 27:1
مراجع Treasury of Scripture Knowledge في ಕನ್ನಡ IRV.
ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.
ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.
ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.
“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.
¶ ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.