ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು.
TSK
TSK · ಯೆಶಾಯ 27:10
مراجع Treasury of Scripture Knowledge في ಕನ್ನಡ IRV.
ಗುದ್ದಲಿಯಿಂದ ಅಗೆಯುತ್ತಿದ್ದ ಯಾವ ಗುಡ್ಡಕ್ಕೂ ನೀನು ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೇ ಇರುವಿ. ಆದರೆ ಅದು ದನಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.
ಆ ದಿನದಲ್ಲಿ ದೇಶದ ಬಲವಾದ ಕೋಟೆಗಳು ಪೂರ್ವದಲ್ಲಿ ಇಸ್ರಾಯೇಲರ ಭಯದಿಂದ ನಿರ್ಜನವಾಗಿದ್ದ, ಅದು ಅಡವಿಯಲ್ಲಿಯೂ, ಬೆಟ್ಟಗಳ ತುದಿಯ ಮೇಲೂ ಕಾಣುವ ಹಾಳು ನಿವೇಶನಗಳಂತಿರುವವು, ಅಂತೂ ದೇಶವೆಲ್ಲಾ ಹಾಳಾಗಿರುವುದು.
ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
‹ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು”› ಅಂದನು.