ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
TSK
TSK · ಯೆಶಾಯ 27:5
مراجع Treasury of Scripture Knowledge في ಕನ್ನಡ IRV.
ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.
ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
‹ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.›
¶ ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.
ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.