ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.
TSK
TSK · ಯೆಶಾಯ 29:10
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
¶ ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.
“ನೀವು ಇಂಥವರಾದ ಕಾರಣ ನಿಮಗೆ ರಾತ್ರಿಯಾಗುವುದು, ದಿವ್ಯದರ್ಶನವಾಗದು, ನಿಮಗೆ ಕತ್ತಲು ಕವಿಯುವುದು ಮತ್ತು ಕಣಿಹೇಳಲಾಗದು. ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವುದು.
“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,