ಮಂತ್ರಿಗಳನ್ನು ಸುಲಿಗೆಮಾಡಿ ಸಾಗಿಸಿಕೊಂಡು ಹೋಗುವನು, ನ್ಯಾಯಾಧಿಪತಿಗಳನ್ನು ಹುಚ್ಚರನ್ನಾಗಿ ಮಾಡುವನು.
TSK
TSK · ಯೆಶಾಯ 29:14
مراجع Treasury of Scripture Knowledge في ಕನ್ನಡ IRV.
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡೆಸಬೇಕೆಂತಲೂ, ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
ಯೆಹೋವನು ಇಂತೆನ್ನುತ್ತಾನೆ. “ಆ ದಿನದಲ್ಲಿ ನಾನು ಎದೋಮಿನೊಳಗೆ ಜ್ಞಾನಿಗಳನ್ನು ಅಳಿಸದೇ ಬಿಡುವೆನೋ,” ಏಸಾವನ ಪರ್ವತದೊಳಗಿಂದ ವಿವೇಕವನ್ನು ಕಿತ್ತುಹಾಕದೇ ಇರುವೆನೇ?
‹ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ”› ಅಂದನು.
¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
¶ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.