TSK

TSK · ಯೆಶಾಯ 29:19

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.

ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಬಡವರಲ್ಲಿ ಹಿರಿಯ ಮಕ್ಕಳು ಆಹಾರವನ್ನು ಕಂಡುಕೊಳ್ಳುವರು. ದಿಕ್ಕಿಲ್ಲದವರೂ ನಿರ್ಭಯವಾಗಿ ಮಲಗಿಕೊಳ್ಳುವರು. ಆದರೆ ನಿಮ್ಮ ಸಂತಾನವನ್ನೋ ಕ್ಷಾಮದಿಂದ ಸಾಯಿಸುವೆನು, ನಿಮ್ಮಲ್ಲಿ ಉಳಿದವರನ್ನು (ಆ ಸರ್ಪವೇ) ಕ್ಷಾಮವು ಕೊಲ್ಲುವುದು.

ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.

¶ ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

‹ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.›

‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

¶ ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.