ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
TSK
TSK · ಯೆಶಾಯ 30:17
مراجع Treasury of Scripture Knowledge في ಕನ್ನಡ IRV.
¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.
ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.
ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,
‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›
ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.