TSK

TSK · ಯೆಶಾಯ 30:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.

ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.

ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.

ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,

¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ!

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.

ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.

“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.

ಮಳೆಯಾಗುವಂತೆ ಹಿಂಗಾರಿನಲ್ಲಿ ಯೆಹೋವನನ್ನು ಬೇಡಿಕೊಳ್ಳಿರಿ; ಯೆಹೋವನೇ ಮಿಂಚುಗಳನ್ನು ಉಂಟುಮಾಡುತ್ತಾನೆ, ಮನುಷ್ಯರಿಗೆ ಸಮೃದ್ಧಿಯಾದ ಮಳೆಯನ್ನು ದಯಪಾಲಿಸುತ್ತಾನೆ, ಎಲ್ಲರಿಗೂ ಹೊಲದ ಪೈರನ್ನು ಅನುಗ್ರಹಿಸುತ್ತಾನೆ.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.