ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
TSK
TSK · ಯೆಶಾಯ 30:28
مراجع Treasury of Scripture Knowledge في ಕನ್ನಡ IRV.
ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ಇಗೋ, ಸಂಜೆಯಲ್ಲಿ ಹೆದರಿ ಉದಯದೊಳಗಾಗಿ ಇಲ್ಲವಾಗುವರು! ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.
ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ.
ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು.
ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
ನೀನು ಕೋಪ ತಿರಸ್ಕಾರದಿಂದ ಲೋಕವನ್ನು ತುಳಿದುಕೊಂಡು ಹೋಗುತ್ತೀ. ಕೋಪದಿಂದ ಜನಾಂಗಗಳನ್ನು ಇಲ್ಲದಂತೆ ಮಾಡುತ್ತಿ.
¶ ‹“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.›
ಇದೇ ಕಾರಣದಿಂದ ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.