¶ ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.
TSK
TSK · ಯೆಶಾಯ 30:29
مراجع Treasury of Scripture Knowledge في ಕನ್ನಡ IRV.
ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ಐಗುಪ್ತದೇಶದಿಂದ ಹೊರಟುಬಂದ ಸಮಯ, ಅಂದರೆ ಸಾಯಂಕಾಲದಲ್ಲಿ ಪಸ್ಕದ ಯಜ್ಞವನ್ನು ಸಮರ್ಪಿಸಬೇಕು.
ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
ಅವರು ದೇವರ ಮಂಜೂಷವನ್ನು ಅಬೀನಾದಾಬನ ಮನೆಯಿಂದ ಹೊರಗೆ ತಂದು, ಒಂದು ಹೊಸ ಬಂಡಿಯ ಮೇಲೆ ಇಟ್ಟರು. ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಓಡಿಸಿದರು.
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.
ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
¶ ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.
ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
¶ ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.
ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.