¶ ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.
TSK
TSK · ಯೆಶಾಯ 30:6
مراجع Treasury of Scripture Knowledge في ಕನ್ನಡ IRV.
ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.
¶ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
¶ ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.
ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.
ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.
ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.
‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›