¶ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
TSK
TSK · ಯೆಶಾಯ 31:2
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.
ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.
ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.
ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.
ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.
ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.
ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.