ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
TSK
TSK · ಯೆಶಾಯ 31:6
مراجع Treasury of Scripture Knowledge في ಕನ್ನಡ IRV.
ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.