TSK

TSK · ಯೆಶಾಯ 31:8

مراجع Treasury of Scripture Knowledge في ಕನ್ನಡ IRV.

العودة إلى المقطع

ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.

ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.

ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.

¶ ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.

ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.

ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.

ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.

ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.