ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
TSK
TSK · ಯೆಶಾಯ 33:11
مراجع Treasury of Scripture Knowledge في ಕನ್ನಡ IRV.
ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,
ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.
ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.
ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.