ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ಯೆಶಾಯ 33:22
مراجع Treasury of Scripture Knowledge في ಕನ್ನಡ IRV.
ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಯೆಹೋವನು ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.
ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ
ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
¶ ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.
ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.
ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.