ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
TSK
TSK · ಯೆಶಾಯ 33:24
مراجع Treasury of Scripture Knowledge في ಕನ್ನಡ IRV.
¶ ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.
ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.
ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.