‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
TSK
TSK · ಯೆಶಾಯ 34:5
مراجع Treasury of Scripture Knowledge في ಕನ್ನಡ IRV.
ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”
ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
¶ ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
¶ ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”
ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.