TSK

TSK · ಯೆಶಾಯ 35:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.

ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.

ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.

ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.

ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,

¶ ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.

¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.

ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.

ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.

ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.

ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,

¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.

ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

¶ ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.

ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.

¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.