ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
TSK
TSK · ಯೆಶಾಯ 35:7
مراجع Treasury of Scripture Knowledge في ಕನ್ನಡ IRV.
ಕಾಲುವೆಗಳು ನಾರುವವು. ಐಗುಪ್ತದ ಹೊಳೆಗಳು ಇಳಿದು, ನೀರಿಲ್ಲದೆ ಒಣಗಿ ಹೋಗುವವು. ಆಪು ಮತ್ತು ಜಂಬುಹುಲ್ಲುಗಳು ಬಾಡುವವು.
ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
‹ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.›
‹ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು”› ಎಂದು ಕೂಗಿ ಹೇಳಿದನು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.