TSK

TSK · ಯೆಶಾಯ 37:4

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು

ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.

ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.

ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.

“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.

ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.

¶ ಆಮೇಲೆ ರಬ್ಷಾಕೆಯು ಎದ್ದು ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.

ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.

ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.

ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.

ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.