ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.
TSK
TSK · ಯೆಶಾಯ 40:31
مراجع Treasury of Scripture Knowledge في ಕನ್ನಡ IRV.
ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,
ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.
ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.
¶ ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.
¶ ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
‹ನೀನು ತಾಳ್ಮೆಯುಳ್ಳವನಾಗಿ›‹ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.›