ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
TSK
TSK · ಯೆಶಾಯ 40:4
مراجع Treasury of Scripture Knowledge في ಕನ್ನಡ IRV.
ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.
ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.
ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.
‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.