ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.
TSK
TSK · ಯೆಶಾಯ 40:5
مراجع Treasury of Scripture Knowledge في ಕನ್ನಡ IRV.
ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
¶ ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.
ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.
ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.