ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.
TSK
TSK · ಯೆಶಾಯ 40:6
مراجع Treasury of Scripture Knowledge في ಕನ್ನಡ IRV.
ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಇಗೋ ಒಂದು ವಾಣಿ! “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ”
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.
ಗಿಬ್ಯದಲ್ಲಿ ತುತ್ತೂರಿಯನ್ನು ಊದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತ್ ಅವೆನಿನಲ್ಲಿ ಆರ್ಭಟಿಸಿರಿ, ಬೆನ್ಯಾಮೀನೇ, ಹಿಂದೆ ನೋಡು!
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.