ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.
TSK
TSK · ಯೆಶಾಯ 41:17
مراجع Treasury of Scripture Knowledge في ಕನ್ನಡ IRV.
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.
ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.
ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.
ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
‹ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.›
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
ಅದಕ್ಕಾತನು, ‹“ನನ್ನ ಕೃಪೆಯೇ ನಿನಗೆ ಸಾಕು,›‹ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ”› ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.