TSK

TSK · ಯೆಶಾಯ 42:1

مراجع Treasury of Scripture Knowledge في ಕನ್ನಡ IRV.

العودة إلى المقطع

‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು ಎಂದು ಹೇಳಿದ್ದೇನೆ’” ಎಂಬುವುದೇ. ಸೆಲಾ

ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.

ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

¶ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.

ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.

ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.

ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.

ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

‹ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ.›‹ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.›

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.