ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
TSK
TSK · ಯೆಶಾಯ 42:16
مراجع Treasury of Scripture Knowledge في ಕನ್ನಡ IRV.
ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.
ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು.
“ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.
“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.
ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
¶ ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,