TSK

TSK · ಯೆಶಾಯ 42:19

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,

ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.

ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ

¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.

“ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.

‹ಅವರನ್ನು ಬಿಡಿರಿ, ಅವರು›‹ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು”› ಅಂದನು.

ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›

¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.

ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.