ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
TSK
TSK · ಯೆಶಾಯ 42:5
مراجع Treasury of Scripture Knowledge في ಕನ್ನಡ IRV.
¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
ನನ್ನ ನ್ಯಾಯವನ್ನು ತಪ್ಪಿಸಿದ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತನಾದ ದೇವರಾಣೆ,
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.
ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.
ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.
ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,