ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.
TSK
TSK · ಯೆಶಾಯ 43:1
مراجع Treasury of Scripture Knowledge في ಕನ್ನಡ IRV.
ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.
(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.
ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.
ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.
ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.
“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
“ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.
ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.
ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.