ಆದರೆ ಇವರೇ ದೇವರನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ನಿನ್ನ ಮಾರ್ಗಗಳ ತಿಳಿವಳಿಕೆಯೇ ನಮಗೆ ಬೇಡ ಎಂದೂ
TSK
TSK · ಯೆಶಾಯ 43:22
مراجع Treasury of Scripture Knowledge في ಕನ್ನಡ IRV.
ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
¶ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.