¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
TSK
TSK · ಯೆಶಾಯ 43:23
مراجع Treasury of Scripture Knowledge في ಕನ್ನಡ IRV.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನು ಕೊಡಲಿಲ್ಲ.
ಇಸ್ರಾಯೇಲರ ವಂಶದವರೇ ನೀವು ಅರಣ್ಯದಲ್ಲಿ ನಲ್ವತ್ತು ವರ್ಷ ನನಗೆ ಯಜ್ಞಗಳನ್ನೂ, ಧಾನ್ಯನೈವೇದ್ಯಗಳನ್ನೂ ಅರ್ಪಿಸಿದ್ದೀರೋ?
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
‹ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ”› ಅಂದನು.