ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
TSK
TSK · ಯೆಶಾಯ 44:11
مراجع Treasury of Scripture Knowledge في ಕನ್ನಡ IRV.
¶ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.
ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
“ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.
ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.
ಹೇಗೆಂದರೆ, ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಅರ್ತೆಮೀ ದೇವಿಯ ಗುಡಿಯಂತೆ ಸಣ್ಣಸಣ್ಣ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸುಬಿನವರಿಗೆ ಬಹಳ ಲಾಭವನ್ನು ಕೊಡುತ್ತಿದ್ದನು.