ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.
TSK
TSK · ಯೆಶಾಯ 44:22
مراجع Treasury of Scripture Knowledge في ಕನ್ನಡ IRV.
ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.
ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.
ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.
ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.
“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.
ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
¶ ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,