ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
TSK
TSK · ಯೆಶಾಯ 44:25
مراجع Treasury of Scripture Knowledge في ಕನ್ನಡ IRV.
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.
ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬಯಲಿಗೆ ಬರುವುದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ! ಅವರು ಬೆಚ್ಚಿಬೀಳುವರು.
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
¶ “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಆ ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”