ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
TSK
TSK · ಯೆಶಾಯ 45:7
مراجع Treasury of Scripture Knowledge في ಕನ್ನಡ IRV.
ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.
ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.
ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.
ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.
ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.
ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.